ಇಂದಿನ ಅತಿಪ್ರಮುಖ ಕನ್ನಡ ಲೇಖಕರಲ್ಲೊಬ್ಬರು ವಸುಧೇಂದ್ರ. ವ್ಯಾವಹಾರಿಕವಾಗಿ IT ಜಗತ್ತಿನಲ್ಲಿ ಮುಳುಗಿ ಹೋಗಿದ್ದರೂ, ಕನ್ನಡ ಸಾಹಿತ್ಯದ ಸವಿರುಚಿಯನ್ನು ಉಂಡವರು, ಉಣಬಡಿಸುತ್ತಿರುವವರು. ವಸುಧೇಂದ್ರ ಕನ್ನಡ ಕಥಾಲೋಕದ ಪ್ರಪಿತಾಮಹ ಎಂದೇ ಗುರುತಿಸಲಾದ ಮಾಸ್ತಿಯವರ ಕಥೆಗಳು ಮತ್ತು ಅವರ ಅನುಭವದ ಕುರಿತು ಬರೆದಿದ್ದಾರೆ. ಅವರು ಹೇಗೆ ಇಂದಿಗೂ ಮೇಲ್ಪಂಕ್ತಿಯಲ್ಲಿ ನಿಂತು ಮಾರ್ಗದರ್ಶಕರಾಗಿದ್ದಾರೆ ಎಂದು ನಮ್ಮೊಡನೆ ಹಂಚಿಕೊಳ್ಳಲಿದ್ದಾರೆ....